ಮೇ. 23ರ ನಂತರ ` ಸಮ್ಮಿಶ್ರ ಸರ್ಕಾರ’ ಪತನ: ನಳೀನ್ ಕುಮಾರ್

ಮೇ. 23ರ ನಂತರ ` ಸಮ್ಮಿಶ್ರ ಸರ್ಕಾರ’ ಪತನ: ನಳೀನ್ ಕುಮಾರ್

ಮಂಗಳೂರು, ಮೇ, 7. ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ದೋಸ್ತಿ ಸರ್ಕಾರವು ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಮೇ. 24 ರಂದು ಪತನವಾಗಲಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಪರ ಇರುವ ಬರಹಗಾರರನ್ನು ಬಂಧಿಸುತ್ತಿರುವ ಮೈತ್ರಿ ಸರ್ಕಾರದ ಧೋರಣೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಮೇ. 23 ರಂದು ಎಲ್ಲಾ ಸ್ಥಾನಗಳು ಬಿಜೆಪಿ ಕೈ ವಶವಾಗಲಿದ್ದು, ಮೇ. 24 ರಂದು ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದರು.

ಸಮ್ಮಿಶ್ರ ಸರ್ಕಾರ ಪತನಗೊಳ್ಳುತ್ತದೆಂಬ ಕಾರಣದಿಂದ ಇರುವಷ್ಟು ದಿನ ಗೊಂದಲ ಸೃಷ್ಠಿ ಮಾಡಿ ಸೀಟ್ ಉಳಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳ ಹೋರಾಟಗಾರರನ್ನು ಬಂಧಿಸುವ ಹೀನಾಯ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದು ಹಿಂದಿನ ತುರ್ತು ಪರಿಸ್ಥಿತಿಯನ್ನು ಸೃಷ್ಠಿ ಮಾಡುವ ತಂತ್ರಗಾರಿಕೆ ಎಂದು ವಾಗ್ದಾಳಿ ನಡೆಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos