ಮೇ. 24 ಕ್ಕೆ ಯಡಿಯೂರಪ್ಪ ಸಿಎಂ: ಉಮೇಶ್ ಜಾಧವ್

ಮೇ. 24 ಕ್ಕೆ ಯಡಿಯೂರಪ್ಪ ಸಿಎಂ: ಉಮೇಶ್ ಜಾಧವ್

ಕಲಬುರಗಿ, ಮೇ. 20, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿಯ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ್ ಜಾಧವ್ ಅವರು, ಚುನಾವಣೋತ್ತರ ಫಲಿತಾಂಶದ ನಂತರ ಕರ್ನಾಟಕದ ಮೈತ್ರಿ ಸರ್ಕಾರ ಬೀಳುವುದು ಬಹುತೇಕ ಖಚಿತವಾಗಿದ್ದು, ಮೇ 24 ರ ನಂತರ ಬಿ ಎಸ್ ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಭಾನುವಾರ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆ ಫಲಿತಾಂಶದಲ್ಲಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಅಸ್ತಿತ್ವಕ್ಕೆ ಬರುತ್ತದೆಂಬ ಸೂಚನೆ ಸಿಕ್ಕಿದ್ದು, ರಾಜ್ಯದಲ್ಲೂ ಬಿಜೆಪಿ ಉತ್ತಮ ಸಾಧನೆ ಮೆರೆಯಲಿದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಡಾ. ಜಾಧವ್, ಇನ್ನು 48 ಗಂಟೆಗಳ ನಂತರ ಜನತೆಯ ಎಕ್ಸಿಟ್ ಪೋಲ್ ಪ್ರಕಟವಾಗಲಿದೆ. ಮೇ. 23 ರಂದು ಕರ್ನಾಟಕದ ಮೈತ್ರಿ ಸರ್ಕಾರ ಬೀಳುವುದು ಖಚಿತ. ಮೇ 24 ರ ನಂತರ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ಪಕ್ಕಾ ಎಂದು ಜಾಧವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos