ಮೇ 5ರಂದು ಬಿಜೆಪಿ ಪ್ರಚಾರ: ಶೆಟ್ಟರ

ಮೇ 5ರಂದು ಬಿಜೆಪಿ ಪ್ರಚಾರ: ಶೆಟ್ಟರ

ಕುಂದಗೋಳ, ಮೇ. 4, ನ್ಯೂಸ್ ಎಕ್ಸ್ ಪ್ರೆಸ್: ಕುಂದಗೋಳ- ಚಿಂಚೋಳಿ ಉಪಚುನಾವಣೆಗೆ ಮೇ 5ರಂದು ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದೊಂದಿಗೆ ಪ್ರಚಾರ ಆರಂಭಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸುದ್ದಿಗೊಷ್ಠಿಯಲ್ಲಿ ಹೇಳಿದರು.

ಕುಂದಗೋಳ- ಚಿಂಚೋಳಿ ಉಪಚುನಾವಣೆ ನಂತರ ರಾಜ್ಯದ ರಾಜಕೀಯದಲ್ಲಿ ಧ್ರುವೀಕರಣ ನಡೆಯಲಿದ್ದು, ಕೇಂದ್ರದಲ್ಲಿ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದರು.

ಕಾಂಗ್ರೆಸ್ ಪ್ರತಿ ಜಿಪಂ ವ್ಯಾಪ್ತಿಯಲ್ಲಿ ಸಚಿವ-ಶಾಸಕರನ್ನು ಪ್ರಚಾರಕ್ಕೆ ನೇಮಿಸುತ್ತಿರುವ ಬಗ್ಗೆ ಪ್ರಶ್ನಿಸಿದಾಗ, ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಸಂಶಯ ವ್ಯಕ್ತವಾಗುತ್ತಿದ್ದು, ಇನ್ನು ಸಚಿವರಾರೆಂಬುದು ಜನತೆಗೆ ಗೊತ್ತಿಲ್ಲ. ಅಲ್ಲದೆ ಶಿಕ್ಷಣ ಮಂತ್ರಿ ಹುದ್ದೆ ಖಾಲಿ ಇದೆ ಎಂದು ವ್ಯಂಗ್ಯವಾಡಿದರು.

ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 104 ಸ್ಥಾನ ಲಭಿಸಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯಿಂದ ಸರ್ಕಾರ ರಚಿಸಿ, ಇದೀಗ ಅವರಲ್ಲಿ ಅಪನಂಬಿಕೆ ಯಿಂದ ಒಬ್ಬರಿಗೊಬ್ಬರು ಬೆನ್ನಿಗೆ ಚೂರಿ ಹಾಕುವ ಕಾರ್ಯ ನಡೆದಿದೆ. ರಾಜ್ಯದಲ್ಲಿ ಯಾವ ಅಭಿವೃದ್ಧಿಗಳು ಆರಂಭವಾಗಿಲ್ಲ. ಹೆಸರಿಗೆ ಮಾತ್ರ ಸಚಿವರಾಗಿದ್ದಾರೆ ಎಂದು ಲೇವಡಿ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos