ಹೊಸಕೋಟೆ, ಮಾ. 30: ನಂದಗುಡಿ ಪೊಲೀಸ್ ಠಾಣೆ ವತಿಯಿಂದ ಮಧ್ಯಾಹ್ನದ ಊಟಕ್ಕೆ ಡಿವೈಎಸ್ಪಿ ಸಕ್ರಿ ಚಾಲನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ನಂದಗುಡಿ ಗ್ರಾಮದ ನಂದಗುಡಿ ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮಿನಾರಾಯಣ್ ಸಿಬ್ಬಂದಿ ಪತಿಯಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕೂಲಿ ಕಾರ್ಮಿಕರಿಗೆ ಮಧ್ಯಾಹ್ನದ ಉಚಿತ ಊಟದ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಪಿಎಸ್ಐ ಲಕ್ಷ್ಮೀನಾರಾಯಣ ಮಾತನಾಡಿ, ನಮ್ಮ ಠಾಣೆಯ ಸಿಬ್ಬಂದಿಗಳ ಒಂದು ದಿನದ ಸಂಬಳ ಹಣದಿಂದ ಇಂದಿನಿಂದ ಏಪ್ರಿಲ್ 14 ರವರೆಗೆ ಊಟ ವಿತರಿಸಲಾಗುವುದು.
ಈ ಸಂದರ್ಭದಲ್ಲಿ ಡಿವೈಎಸ್ಪಿ N B ಸಕ್ರಿ. ಪಿಎಸ್ಐ ಲಕ್ಷ್ಮೀನಾರಾಯಣ, ನಂದಗುಡಿ ಪ್ರಾಥಮಿಕ ಆರೋಗ್ಯ ಇಲಾಖೆಯ ಡಾ. ಭಾಸ್ಕರ್ ರೆಡ್ಡಿ, ಹೋಸಕೋಟೆ ಎಂಟಿಬಿ ಚಾರಿಟೆಬಲ್ ಟ್ರಸ್ಟ್ ವ್ಯವಸ್ಥಾಪಕ, ವಿಶ್ವನಾಥ್, ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು