ಸಿದ್ದರಾಮಯ್ಯರನ್ನು ದುನಿಯಾ ವಿಜಿ ಭೇಟಿ ಮಾಡಿದ್ದು,ಯಾಕೆ?

ಸಿದ್ದರಾಮಯ್ಯರನ್ನು ದುನಿಯಾ ವಿಜಿ ಭೇಟಿ ಮಾಡಿದ್ದು,ಯಾಕೆ?

ಬೆಂಗಳೂರು,, ಜೂನ್. 1, ನ್ಯೂಸ್ ಎಕ್ಸ್ ಪ್ರೆಸ್: ಸ್ಯಾಂಡಲ್‍ವುಡ್ ಕರಿಚಿರತೆ ದುನಿಯಾ ವಿಜಯ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಜಿ ತಮ್ಮ  ‘ಸಲಗ’ ಚಿತ್ರತಂಡದ ಜೊತೆ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದು, ಈಗ ಈ ಫೋಟೋಗಳನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಆದರೆ ದುನಿಯಾ ವಿಜಯ್ ಭೇಟಿ ಮಾಡಿದ್ದು ಯಾಕೆ ಎಂಬ ವಿಷಯವನ್ನು ಹೇಳಿಕೊಂಡಿಲ್ಲ.

“ಸಲಗ ಚಿತ್ರತಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆದ ಕ್ಷಣ” ಎಂದು ಟ್ವಿಟ್ಟರಿನಲ್ಲಿ ಹಂಚಿಕೊಂಡಿರುವ ಫೋಟೋದೊಂದಿಗೆ ಬರೆದುಕೊಂಡಿದ್ದಾರೆ. ಇತ್ತೀಚೆಗೆ ಸಲಗ ಚಿತ್ರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos