ಬಿಜೆಪಿ ಪದಾಧಿಕಾರಿಗಳ ಸಭೆ!

ಬಿಜೆಪಿ ಪದಾಧಿಕಾರಿಗಳ ಸಭೆ!

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಮೀಟಿಂಗ್ ಎರಡು ದಿನಗಳ ಸಭೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ. ಪಂಚ ರಾಜ್ಯಗಳ ಚುನಾವಣೆಯಲ್ಲಿ ದಿಗ್ವಿಜಯದ ಉಮ್ಮಸ್ಸಿನಲ್ಲಿರುವ ಬಿಜೆಪಿ ಇದೀಗ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ರಣತಂತ್ರ ರೂಪಿಸುತ್ತಿದೆ. ಅದಕ್ಕಾಗಿ ನಿನ್ನೆ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಸಭೆ ನಡೆಯಿತು. ಎಲ್ಲಾ ರಾಜ್ಯಗಳಲ್ಲಿನ  ಬಿಜೆಪಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಸ್ತುವಾರಿಗಳು ಮತ್ತು ಇತರ ಪದಾಧಿಕಾರಿಗಳು ಭಾಗಿಯಾಗಿದ್ದರು. ನಿನ್ನೆ ಸಂಜೆ ಆರಂಭವಾದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನರೇಂದ್ರ ಮೋದಿಯವರು ಭಾಗವಹಿಸಿದ್ದರು. ಮೋದಿಯನ್ನ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸ್ವಾಗತಿಸಿದರು. ನಂತರ ಎರಡು ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆಗೆ ಉದ್ಘಾಟನೆ ಮಾಡಿದರು. ಎರಡು ದಿನಗಳ ಸಭೆಯಲ್ಲಿ ಇತ್ತೀಚಿಗೆ ನಡೆದಂತ ಪಂಚ ರಾಜ್ಯಗಳ ಪಲಿತಾಂಶದ ಬಗ್ಗೆ ಚರ್ಚೆ. ಜನವರಿ 22ರಂದು ರಾಮಮಂದಿರ ಉದ್ಘಾಟನೆಯ ಸಿದ್ಧತೆಯ ಬಗ್ಗೆ ಚರ್ಚಿಸಲಾಗುತ್ತದೆ. ಅಲ್ಲದೆ ರಾಮಮಂದಿರ ವಿಷಯವನ್ನು ಜನರ ಬಳಿಗೆ ಕೊಂಡೊಯ್ಯಲು ಪ್ಲಾನ್ ಮಾಡುತ್ತಿದ್ದಾರೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಮತದಾರಿಗೆ ತಲುಪಿಸುವುದು ಹಾಗೂ ಅಭಿವೃದ್ಧಿ ಹೊಂದಿದ ಭಾರತದ ವಿಷಯವು ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos