ಮೈಸೂರು, ಜು 19 : ಮೂರನೇ ಆಷಾಢ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವ ಹೆಚ್ ಡಿ. ರೇವಣ್ಣ ವಿಶ್ವಾಸ ಮತಯಾಚನೆ ವಿಚಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿ, ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ ತೆಗೆದು ಕೊಂಡಿದ್ದರು. ಎಲ್ಲಾ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.