ಸಚಿವ ಮಾಧುಸ್ವಾಮಿ ಕಣ್ಣೀರು..!

ಸಚಿವ ಮಾಧುಸ್ವಾಮಿ ಕಣ್ಣೀರು..!

ದಾವಣಗೆರೆ, ನ. 21: ಕಾಗಿನೆಲೆ ಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಹೊಸದುರ್ಗದ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮುಂದೆಯೇ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿಯವರು ಕಣ್ಣೀರು ಹಾಕಿದ್ದಾರೆ.
ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿಯ ಕಾಗಿನೆಲೆ ಕನಕ ಗುರು ಪೀಠದಲ್ಲಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸಾನಿಧ್ಯದಲ್ಲಿ ಸಭೆ ನಡೆಸಲಾಯಿತು. ಸಭೆ ನಡೆಯುತ್ತಿರುವ ವೇಳೆಯೂ ಸಚಿವರು ಕಣ್ಣೀರು ಹಾಕಿದ್ದು, ನಂತರ ನಡೆದ ಸುದ್ದಿಗೋಷ್ಠಿ ಸಂದರ್ಭದಲ್ಲಿಯೂ ಕಣ್ಣೀರು ಹಾಕಿದ್ದಾರೆ.
ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ನಿರಂಜನಾನಂದಪುರಿ ಶ್ರೀಗಳು ಮಾತನಾಡಿ, ನಮಗೂ ಸಾಕಷ್ಟು ಕೋಪಗಳಿದ್ದವು. ಆದರೆ ಸಚಿವರ ಕಣ್ಣಂಚಿನಲ್ಲಿ ಕಣ್ಣೀರು ಇರುವುದನ್ನು ನೋಡಿದೆ. ಮಾತುಕಥೆ ನಡೆಸುತ್ತಿರುವ ವೇಳೆ ಸಚಿವರು ಪೊಲೀಸರಿಗೂ ನಾಮಫಲಕ ಹಾಕಲು ಯಾವುದೇ ರೀತಿ ಅಡ್ಡಿ ಮಾಡಬೇಡಿ ಎಂದು ಸೂಚಿಸಿದರು ಎಂದು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ನಾನು ಯಾವತ್ತೂ ವೃತ್ತಕ್ಕೆ ಹೆಸರು ಇಡುವುದನ್ನು ವಿರೋಧ ಮಾಡಿಲ್ಲ. ಸ್ವಾಮಿಗಳಿಗೆ ಒಂದು ಕೆಟ್ಟ ಪದವನ್ನೂ ಬಳಸಿಲ್ಲ. ಸಭೆಯಲ್ಲಿ ಗೊಂದಲವಾದಾಗ ಏರು ಧ್ವನಿಯಲ್ಲಿ ಮಾತನಾಡಿ, ನನಗೂ ಮಾತನಾಡಲು ಬಿಡಿ ಎಂದು ಹೇಳಿದೆ ಅಷ್ಟೇ. ಯಾವುದೇ ಸಮುದಾಯಕ್ಕೆ ನಾನು ನೋವು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು

ಫ್ರೆಶ್ ನ್ಯೂಸ್

Latest Posts

Featured Videos