ಹಾವೇರಿ : ಅಧಿಕಾರಿಗಳ ಜತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸಭೆ ನಡೆಸಿ ತಾಕೀತು ಮಾಡಿದರು.
ಹಿರೇಕೆರೂರು ತಾಲೂಕಿನಲ್ಲಿ ಕೋವಿಡ್-೧೯ ಸೋಂಕು ಹಿನ್ನಲೆ ಕ್ಷೇತ್ರದಲ್ಲಿ ವೈದ್ಯಕೀಯ ಸೌಲಭ್ಯ, ಆಸ್ಪತ್ರೆಗಳ ಸ್ಥಿತಿಗತಿ, ವೈದ್ಯರ ಸೇವೆ ಇತ್ಯಾದಿ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಹಿರೇಕೆರೂರಿನ ನಿವಾಸದಲ್ಲಿಂದು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.
ಕೋವಿಡ್ ಆಸ್ಪತ್ರೆಯಲ್ಲಿ ೧೬ ಕೊರೊನಾ ಸೋಂಕಿತರಿದ್ದು, ಕೋವಿಡ್ ಆಸ್ಪತ್ರೆ ತೆರೆಯಲಾಗಿದೆ. ಪರ್ಯಾಯ ವೈದ್ಯ ಸಿಬ್ಬಂದಿ ಒದಗಿಸಬೇಕು. “ಡಿ” ಗ್ರೂಪ್ ನೌಕರರ ಸೇವೆಯೂ ಸ್ವಚ್ಛತೆಗೆ ಅಗತ್ಯವಿದೆ. ಸಿಬ್ಬಂದಿಗಳನ್ನು ಶೀಘ್ರವಾಗಿ ಒದಗಿಸಬೇಕೆಂದರು. ಡಿಸಿ ಕೃಷ್ಣಾ ಬಾಜಪೆ, ಜಿಲ್ಲಾವೈದ್ಯಾಧಿಕಾರಿ ರಾಜೇಂದ್ರ ದೊಡ್ಡಮನಿಅವರಿಗೆ ಕರೆ ಮಾಡಿ ಆಸ್ಪತ್ರೆಗೆ ಅಂಬ್ಯಲ್ಯುನ್ಸ್ ಒದಗಿಸಬೇಕೆಂದರು.