ಪೀಣ್ಯ: ದಾಸರಹಳ್ಳಿ ಸಮೀಪದ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ ೭೫ ಶಂಕರ ಮಠದಲ್ಲಿನ ಕಾವೇರಿನಗರದ ತರಕಾರಿ ಮಾರುಕಟ್ಟೆ ಹತ್ತಿರ ಇರುವ ಉದ್ಯಾನವನದಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಎಂ.ಶಿವರಾಜು ಅನುದಾನದಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಸಾರ್ವಜನಿಕ ಜಿಮ್ನ್ನು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು ದೈನಂದಿನ ಜೀವನದಲ್ಲಿ ಎಲ್ಲರೂ ಆರೋಗ್ಯವಾಗಿರಲು ಯೋಗ, ಪ್ರಾಣಾಯಾಮ, ಧ್ಯಾನ ಹಾಗೂ ವ್ಯಾಯಾಮದಂತಹ ಚಟುವಟಿಕೆ ಕೈಗೊಳ್ಳಬೇಕು ಆಗಲೇ ನಮ್ಮ ದೇಹ ಮತ್ತು ಮನಸ್ಸು ಉಲ್ಲಾಸಿತವಾಗಿ ಇರುತ್ತದೆ. ಎಲ್ಲರೂ ಸ್ವಾಸ್ಧ್ಯ, ಸ್ವಚ್ಛ ಪರಿಸರ ಸಂರಕ್ಷಣೆ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ ಜಿಮ್ ನಿರ್ಮಿಸಿದ್ದು ಎಲ್ಲರೂ ಇದರ ಸದಪಯೋಗವನ್ನು ಪಡೆದುಕೊಂಡು ಸದೃಢ ದೇಹ, ಆರೋಗ್ಯದಿಂದ ದಿನವನ್ನು ಕಳೆಯುವಂತೆ ಸಚಿವರು ತಿಳಿಸಿದರು.
ಪಾಲಿಕೆ ಸದಸ್ಯ ಎಂ.ಶಿವರಾಜು ಅವರು ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲ ಕಡೆಗಳಲ್ಲೂ ಇದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದು ಉತ್ತಮ ಆರೋಗ್ಯ ಮತ್ತು ಸಂತೋಷ ನೆಮ್ಮದಿಯಿಂದ ಜೀವನ ನಡೆಸುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.