ಸಚಿವ ಸುಧಾಕರ್ ಮೋಜು ಮಸ್ತಿ,

ಸಚಿವ ಸುಧಾಕರ್ ಮೋಜು ಮಸ್ತಿ,

ಬೆಂಗಳೂರು, ಏ. 12 : ಕೊರೊನಾ ಸೋಂಕಿನಿಂದ ರಾಜ್ಯದ ಜನ ತತ್ತರಿಸುತ್ತಿರುವ ವೇಳೆಯಲ್ಲಿ ಜವಾಬ್ದಾರಿ ಮರೆತು ಮಕ್ಕಳೊಂದಿಗೆ ಈಜುಕೊಳದಲ್ಲಿ ಮೋಜು ಮಾಡುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಈಡೀ ಜಗತ್ತೇ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದೆ. ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಸುಧಾಕರ್ ಅವರು ತಮ್ಮ ಜವಾಬ್ದಾರಿಯನ್ನು ಮರೆತು ಈಜುಕೊಳದಲ್ಲಿ ಈಜುತ್ತಿದ್ದಾರೆ. ಇದು ನೈತಿಕತೆ ಮತ್ತು ಸೈದ್ಧಾಂತಿಕ ಶ್ರೇಷ್ಠತೆಯ ವಿಚಾರ. ಕೂಡಲೇ ಸಚಿವ ಸುಧಾಕರ್ ಅವರು ರಾಜೀನಾಮೆ ನೀಡಬೇಕು, ಇಲ್ಲವೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಸುಧಾಕರ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos