ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಾಲೂಕಿನ ಕಣ್ಣಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಳ್ಳಿಕೇರಿ ಗ್ರಾಮಕ್ಕೆ ಭೇಟಿ ನೀಡಿ. ಗ್ರಾಮದ ಪ್ರತಿ ಮನೆ ಮನೆಗಳಿಗೂ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿ ಅನಾವಶ್ಯಕವಾಗಿ ಪಟ್ಟಣಕ್ಕೆ ಆಗಮಿಸದಂತೆ ಗ್ರಾಮಸ್ಥರಿಗೆ ತಿಳಿಸಿದರು.
ನಂತರ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸುವಂತೆ ಸೂಚಿಸಿದರು.
ನಂತರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಕೋವಿಡ್ ಲಸಿಕೆ ವಿತರಣೆ ಸಿದ್ದವಾಗುತ್ತಿರುವ ಶೆಡ್ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ವೆಂಟಿಲೇಟರ್ ಬೆಡ್ಗಳ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.