ಪ್ರಕಾಶ್ ಹುಕ್ಕೇರಿ ಗೆಲ್ಲುವಿಗೆ ಮೀಸೆ ಬೆಟ್ಟಿಂಗ್!

ಪ್ರಕಾಶ್ ಹುಕ್ಕೇರಿ ಗೆಲ್ಲುವಿಗೆ ಮೀಸೆ ಬೆಟ್ಟಿಂಗ್!

ಬೆಳಗಾವಿ (ಚಿಕ್ಕೋಡಿ), ಮೇ 22,ನ್ಯೂಸ್ ಎಕ್ಸ್ ಪ್ರೆಸ್ :ಚುನಾವಣೆ ವೇಳೆ ಹಣ, ಆಸ್ತಿ ಬೆಟ್ಟಿಂಗ್ ಕಟ್ಟೋದು ಸಹಜ. ಮೀಸೆ ಬೆಟ್ಟಿಂಗ್ ಎಂದು ಆಶ್ಚರ್ಯವಾಗಬಹುದು. ಚಿಕ್ಕೋಡಿ ಮಾಜಿ ಪುರಸಭೆ ಸದಸ್ಯ ರವಿ ಮಾಳಿ ಕಳೆದ 20 ವರ್ಷ ಪ್ರೀತಿಯಿಂದ ಬೆಳೆಸಿದ ಮೀಸೆ-ಗಡ್ಡ ಪಣಕ್ಕೆಟ್ಟಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶ  ಹೊರ ಬೀಳಲು ಇನ್ನೂ ಒಂದೇ ದಿನ ಬಾಕಿ ಇದೆ. ಪ್ರಕಾಶ್ ಹುಕ್ಕೇರಿ ಅವರು ಈ ಭಾರಿ ಲೋಕಸಮರದಲ್ಲಿ ಗೆಲ್ಲದಿದ್ದರೆ ಅರ್ಧ ಮೀಸೆ ಅರ್ಧ ಗಡ್ಡ ತೆಗೆಯುತ್ತೇನೆ. ಹಾಗೆಯೇ ಚಿಕ್ಕೋಡಿಯಲ್ಲಿ ಪಟ್ಟಣದಲ್ಲಿ ಓಡಾಡುತ್ತೇನೆ ಎಂದು ಚಾಲೆಂಜ್ ಕಟ್ಟಿದ್ದಾರೆ.  ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಯಾವುದೇ ಕಾರಣಕ್ಕೂ ಗೆಲ್ಲುವದಿಲ್ಲ.ಆದ್ದರಿಂದ ನಮ್ಮ ನಾಯಕರಿಗಾಗಿ ಈ ಮೀಸೆ ಬೆಟ್ಟಿಂಗ್ ಕಟ್ಟಿದ್ದೇನೆ ಎಂದು ಮಾಜಿ ಪುರಸಭೆ ಸದಸ್ಯ ರವಿ ಮಾಳಿ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos