ಬೆಂಗಳೂರು: ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಹಲ್ಲೆಗೊಳಗಾಗಿದ್ದ ಹೊಸಪೇಟೆ ಶಾಸಕ ಆನಂದ್ ಸಿಂಗ್ ರನ್ನು ಕಣ್ಣಿನ ಚಿಕಿತ್ಸೆಗಾಗಿ ನಾರಾಯಣ ನೇತ್ರಾಲಯಕ್ಕೆ ಗುರುವಾರ ದಾಖಲಿಸಲಾಗಿದೆ.
4
ದಿನಗಳ ಹಿಂದೆ ಕಂಪ್ಲಿ ಶಾಸಕ ಗಣೇಶ್ರಿಂದ ಹಲ್ಲೆಗೊಳಗಾಗಿದ್ದ ಆನಂದ್ ಸಿಂಗ್ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಅಲ್ಲಿ ಚೇತರಿಸಿಕೊಳ್ಳುತ್ತಿದ್ದರೂ, ಕಣ್ಣಿನ ಭಾಗಕ್ಕೆ ಬಿದ್ದಿರುವ ಪೆಟ್ಟಿನಿಂದಾಗಿ ಅವರಿಗೆ ಸರಿಯಾಗಿ ಕಣ್ಣು ಬಿಟ್ಟು ನೋಡಲು ಸಾಧ್ಯವಾಗುತ್ತಿಲ್ಲ.
ಈ ಕಾರಣದಿಂದಾಗಿ ಅವರನ್ನು ನಾರಾಯಣ ನೇತ್ರಾಲಯಕ್ಕೆ ಗುರುವಾರ ಬೆಳಗ್ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ರೆಸಾರ್ಟ್ ನಲ್ಲಿ ಆಪರೇಷನ್ ಕಮಲದ ವಿಚಾರವಾಗಿ ಕಂಪ್ಲಿ ಗಣೇಶ್ ಮತ್ತು ಶಾಸಕ ಭೀಮಾನಾಯ್ಕ್ ನಡುವೆ ವಾಗ್ವಾದ ಉಂಟಾಗಿ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದಾರೆ
ಎಂದು ಹೇಳಲಾಗಿದೆ.