ಶಾಸಕರು `ರೆಸಾರ್ಟ್’ಗಳಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ ರಾಜ್ಯ ರೈತ ಸಂಘ ಎಚ್ಚರಿಕೆ

ಶಾಸಕರು `ರೆಸಾರ್ಟ್’ಗಳಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ ರಾಜ್ಯ ರೈತ ಸಂಘ ಎಚ್ಚರಿಕೆ

ರಾಯಚೂರು: ಶಾಸಕರು ಇನ್ಮುಂದೆ ರೆಸಾರ್ಟ್ ಗಳಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಮುಖಕ್ಕೆ ಸಗಣಿ ಎರಚಿ ಪ್ರತಿಭಟನೆ ನಡೆಸುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಸಾರ್ಟ್ ನಲ್ಲಿ ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಇಂಥ ಪೋಲಿ ಪುಂಡರಿಗೆ ಮತದಾರರೇ ಬುದ್ಧಿ ಕಲಿಸಬೇಕು. ರಾಜಕೀಯಕ್ಕಾಗಿ ರೆಸಾರ್ಟ್ ಗಳಲ್ಲಿ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸಗಣಿ ಬಳಿಯಲಿದ್ದಾರೆ ಎಂದು ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ನಾಳೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಜೊತೆ ಬಜೆಟ್ ಪೂರ್ವ ಸಭೆ ನಿಗದಿಯಾಗಿದ್ದು, ರೈತಪರ ವಿಚಾರಗಳ ಸೇರ್ಪಡೆಗೆ ಒತ್ತಾಯಿಸಲು ನಿರ್ಧರಿಸಲಾಗಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos