ಬೆಂಗಳೂರು: ಈಗಲ್ಟನ್ ರೆಸಾರ್ಟ್ನಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಕಾಂಗ್ರೆಸ್ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಅವ್ರನ್ನ ಕಾಂಗ್ರೆಸ್ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಮೊನ್ನೆ ರಾತ್ರಿ ಈಗಲ್ಟನ್ ರೆಸರ್ಟ್ನಲ್ಲಿ ಶಾಸಕ ಆನಂದ್ ಸಿಂಗ್ ಜೊತೆ ಮಾತು, ಮಾತಿಗೆ ಬೆಳಸಿ ಗಲಾಟೆ ಮಾಡಿದ್ದರು. ಅಲ್ಲದೇ ಆನಂದ್ಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಘಟನೆಯ ನೈಜತೆಯನ್ನ ಅರಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೊನೆಗೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಇನ್ನು ಅಮಾನತು ಮಾಡಿರುವ ಬಗ್ಗೆ ಕೆಪಿಸಿಸಿ ಕರ್ಯರ್ಶಿ ವಿ.ವೈ.ಘರ್ಪಡೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.