ಮಾನವೀತೆ ಮೇರೆದ ಶಾಸಕ ಹಾಲಪ್ಪ

ಮಾನವೀತೆ ಮೇರೆದ ಶಾಸಕ ಹಾಲಪ್ಪ

ಶಿವಮೊಗ್ಗ, ಜೂ. 20 : ಅಪಘಾತದಲ್ಲಿ ಗಾಯಗೊಂಡಿದ್ದ ಮಂದಿಗೆ ಸಹಾಯ ಮಾಡಿ ಆಸ್ಪತ್ರೆ ದಾಖಲಿಸುವ ಮೂಲಕ ಸಾಗರ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ ತಾಲೂಕು ಚೋರಡಿ ಬಳಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟಿಟಿ ಪಲ್ಟಿಯಾಗಿದ್ದು, ಇದೇ ಮಾರ್ಗವಾಗಿ ಬರುತ್ತಿದ್ದ ಹಾಲಪ್ಪ ಮತ್ತು ಅವರ ಬೆಂಗಲಿಗರು ಗಾಯಾಳುಗಳಿಗೆ ನೆರವು ನೀಡಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಆಗಮಿಸುತ್ತಿದಂತೆ ತಕ್ಷಣ ಅಂಬುಲೆನ್ಸ್ ಕರೆ ಮಾಡಿ ಮಾಹಿತಿ ನೀಡಿದ್ದು, ಪಲ್ಟಿಯಾಗಿದ್ದ ವಾಹನದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅದೃಷ್ಟಶಾತ್ ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಸಾಗರ ರಸ್ತೆಯ ಚೋರಡಿ ಸೇತುವೆ ಬಳಿ ಚಾಲಕನ ಅಜಾಗರೂಕತೆ ಚಾಲನೆಯಿಂದ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos