ಬಳ್ಳಾರಿ, ಜು. 12 : ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಂತರ ಬೆಂಗಳೂರಿನ ತಮ್ಮ ನಿವಾಸಕ್ಕೆ ಮರಳಿದ್ದಾರೆ. ಶಾಸಕ ನಾಗೇಂದ್ರ ಎದೆಯಲ್ಲಿ ನೋವು ಕಾಣಿಸಿದ್ದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ,ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಸೂಕ್ತ ಚಿಕಿತ್ಸೆ ಪಡೆದ ಬಳಿಕ ವೈದ್ಯರ ಸಲಹೆ ಮೇರೆಗೆ ಮನೆಗೆ ತೆರಳಿದ್ದಾರೆ. ಶಾಸಕ ನಾಗೇಂದ್ರ ಆಸ್ಪತ್ರೆ ಸೇರಿದ್ದು, ಹಲವು ಊಹಾಪೋಹಗಳಿಗೆ ಕಾರಣ.