ಶಾಸಕ ಹೆಬ್ಬಾರ್ ಹೊಸಬಾಂಬ್

ಶಾಸಕ  ಹೆಬ್ಬಾರ್ ಹೊಸಬಾಂಬ್

ಕಾರವಾರ, ಜು. 25 : ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಸಂಪರ್ಕದಲ್ಲಿ ಇಲ್ಲ ಎಂದಿದ್ದಾರೆ.
ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಾವು ಯಾವ ಬಿಜೆಪಿ ನಾಯಕರ ಜೊತೆ ಸಂಪರ್ಕವಿಲ್ಲ. ಸದ್ಯ ರಾಜ್ಯದಲ್ಲಿ ಆಗುತ್ತಿರುವ ಬಿಜೆಪಿ ಸರ್ಕಾರ ರಚನೆಯ ಬೆಳವಣಿಗೆಗೆ ನಮಗೆ ಯಾವುದೇ ಸಂಬಂಧ ಇಲ್ಲ. ನಾವು ಕೇವಲ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದೇವೆ. ಇಂದಿಗೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ ಎಂದರು.
ಶಾಸಕ ರಾಜೀನಾಮೆ ಸಲ್ಲಿಕೆ ಮಾಡಿರುವುದರಿಂದ ರಾಜೀನಾಮೆ ಅಂಗೀಕಾರ ಬಳಿಕ ಎಲ್ಲರೂ ಒಟ್ಟಿಗೆ ಸೇರಿ ತೀರ್ಮಾನ ಮಾಡುತ್ತೇವೆ. ನಮ್ಮ ನಾಯಕರು ಸಿದ್ದರಾಮಯ್ಯ ಅವರು, ಅವರೇ ದೂರ ಉಳಿಯಿರಿ ಎಂದಿದ್ದಾರೆ. ಸ್ಪೀಕರ್ ಅವರಿಗೆ ಮನವಿ ಮಾಡಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನದ ಮೇಲೆ ನಮ್ಮ ಮುಂದಿನ ತೀರ್ಮಾನ ಇರುತ್ತದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos