ಮಂಡ್ಯ ಪಕ್ಷೇತರ ಅಭ್ಯರ್ಥಿ `ಸುಮಲತಾ’ ನಾಮಪತ್ರ ಹಿಂಪಡೆಯಲು ನಿರ್ಧಾರ!

ಮಂಡ್ಯ ಪಕ್ಷೇತರ ಅಭ್ಯರ್ಥಿ `ಸುಮಲತಾ’ ನಾಮಪತ್ರ ಹಿಂಪಡೆಯಲು ನಿರ್ಧಾರ!

ಮಂಡ್ಯ, ಮಾ.27, ನ್ಯೂಸ್ ಎಕ್ಸ್ ಪ್ರೆಸ್:  ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಮಂಜೇಗೌಡ ಅವರು ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸುಮಲತಾ ಅವರ ಪತಿ ಮಂಜೇಗೌಡ, ನಾನು ಅಪ್ಪಟ ದರ್ಶನ್ ಅಭಿಮಾನಿ, ಯಾರದೋ ಮಾತು ಕೇಳಿ ನನ್ನಪತ್ನಿ ನಾಮಪತ್ರ ಸಲ್ಲಿಸಿದ್ದಾಳೆ. ನಾಳೆ ನನ್ನ ಪತ್ನಿಯೊಂದಿಗೆ ತೆರಳಿ ನಾಮಪತ್ರ ವಾಪಸ್ ಪಡೆಯುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಗೊರವಿ ಗ್ರಾಮದ ಸುಮಲತಾ ಪತಿ ಮಂಜೇಗೌಡ ಹೇಳಿದ್ದಾರೆ.

ನಿನ್ನೆಯಷ್ಟೇ ಮೂವರು ಸುಮಲತಾ ಹೆಸರಿನ ಮಹಿಳೆಯರು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಕೆ.ಆರ್. ಪೇಟೆ ತಾಲೂಕಿನ ಗೊರವಿ ಗ್ರಾಮದ ಸುಮಲತಾ ಮಂಜೇಗೌಡ ಕೂಡ ಒಬ್ಬರು.

ಫ್ರೆಶ್ ನ್ಯೂಸ್

Latest Posts

Featured Videos