‘ಮೋದಿ ಹೊಡೆತಕ್ಕೆ ನಾವೇಲ್ಲಾ ಒಂದಾಗಿದ್ದೇವೆ’: ಸಚಿವ ಸತೀಶ್

‘ಮೋದಿ  ಹೊಡೆತಕ್ಕೆ ನಾವೇಲ್ಲಾ ಒಂದಾಗಿದ್ದೇವೆ’: ಸಚಿವ ಸತೀಶ್

ಬೆಳಗಾವಿಮೇ. 25, ನ್ಯೂಸ್ಎಕ್ಸ್ ಪ್ರೆಸ್‍: ಕಾಂಗ್ರೆಸ್-ಜೆಡಿಎಸ್ ಒಂದಾಗಲು ಯಾವುದೇ ಔಷಧಿ ನಾಟಿರಲಿಲ್ಲ. ಇದೀಗ ಮೋದಿ ಅವರು ನೀಡಿರೋ ಹೊಡೆತದ ಔಷಧಿ ಫಲ ನೀಡಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಒಂದಾಗಿದ್ದೇವೆ ಎಂದು ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ರಿವರ್ಸ್ ಆಪರೇಷನ್ ಮಾಡಲು ಸಿದ್ಧತೆ ನಡೆದಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೋದಿ ಅಲೆ ಕೆಲಸ ಮಾಡಲ್ಲ ಎಂದರು. ಸಿದ್ದರಾಮಯ್ಯ ಸಿಎಂ ಆಗೋ ವಿಚಾರ ಸದ್ಯ ಮುಕ್ತಾಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಡುಗಡೆಯಾಗದ ಸಿನಿಮಾದ ರೀತಿ ಆಗಿದೆ ಎಂದು ವ್ಯಂಗ್ಯವಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos