ಚೆನ್ನೈ, ಅ. 12: ಇಂದು ಬೆಳ್ಳಂಬೆಳಗ್ಗೆ ಮಹಾಬಲಿಪುರಂನಲ್ಲಿರುವ ಸಮುದ್ರ ದಡದಲ್ಲಿ ಪ್ರಧಾನಿ ಮೋದಿ ಅವರು ಕಸ ತೆಗೆಯುವ ಕೆಲಸ ಮಾಡುವ ಮೂಲಕ ಜನರಿಗೆ ಸ್ವಚ್ಛತೆಯ ಸಂದೇಶ ಸಾರಿದ್ಧಾರೆ. ದೇಶದ ಪ್ರಧಾನಿ ಇಂತಹ ಸ್ವಚ್ಛತಾ ಕಾರ್ಯ ಮಾಡಿರುವುದು ಎಲ್ಲರ ಪ್ರಶಂಸೆಗೆ ಮೆಚ್ಚುಗೆಯಾಗಿದೆ.
ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಸಮುದ್ರದ ತೀರದಲ್ಲಿ ವಾಕಿಂಗ್ ಮಾಡಿದ್ಧಾರೆ. ಇದೇ ವೇಳೆ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳು, ಮತ್ತಿತರ ಕಸವನ್ನು ಬ್ಯಾಗ್ವೊಂದಕ್ಕೆ ತುಂಬಿಸಿದ್ದಾರೆ.
ಬಳಿಕ ಆ ಬ್ಯಾಗ್ ನ ಹೋಟೆಲ್ ಸಿಬ್ಬಂದಿ ಜಯರಾಜ್ಗೆ ಕೊಟ್ಟೆ. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳೋಣ. ಜೊತೆಗೆ ನಾವು ಸಹ ಸದೃಢ ಹಾಗೂ ಆರೋಗ್ಯವಾಗಿರಬೇಕು,” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.