ಏರ್ ಸ್ಟ್ರೈಕ್ ಮಾಡಿದ್ದಕ್ಕೆ ಜೆಡಿಎಸ್, ಕಾಂಗ್ರೆಸ್‍ಗೆ ನೋವಾಗಿದೆ: ಮೋದಿ

ಏರ್ ಸ್ಟ್ರೈಕ್ ಮಾಡಿದ್ದಕ್ಕೆ ಜೆಡಿಎಸ್, ಕಾಂಗ್ರೆಸ್‍ಗೆ ನೋವಾಗಿದೆ: ಮೋದಿ

ಬೆಂಗಳೂರು, ಏ. 9, ನ್ಯೂಸ್ ಎಕ್ಸ್ ಪ್ರೆಸ್: ಬಾಲಕೋಟ್ ಮೇಲಿನ ವಾಯು ದಾಳಿಯಿಂದ ಪಾಕಿಸ್ತಾನಕ್ಕೆ ನೋವು ಆಗಿದೆಯೋ ಗೊತ್ತಿಲ್ಲ. ಇಲ್ಲಿಯ ಜೆಡಿಎಸ್ ಮತ್ತು ಕಾಂಗ್ರೆಸ್ ತುಂಬಾನೇ ನೋವಾಗಿದೆ. ಇಲ್ಲಿಯ ಮುಖ್ಯಮಂತ್ರಿ ದೇಶದ ಪರಾಕ್ರಮದ ಬಗ್ಗೆ ಮಾತನಾಡಬಾರದು ಎಂದು ಹೇಳುತ್ತಾರೆ. ತಮ್ಮ ಮತಗಳ ಎಲ್ಲಿ ಕಳೆದು ಹೋಗುತ್ತೆ ಎಂಬ ಭಯದಿಂದ ಭಾರತವನ್ನೇ ವಿರೋಧ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ದೇಶದೆಲ್ಲೆಡೆ ಭಾರತ್ ಮಾತಾ ಕೀ ಜೈಕಾರ ನಿಮ್ಮಿಂದ ಕೇಳುತ್ತಿದೆ. ಐದು ವರ್ಷಗಳ ಹಿಂದೆ ನೀವು ನೀಡಿದ್ದ ಅಧಿಕಾರದಿಂದ ದೇಶದೆಲ್ಲೆಡೆ ಹಿಂದೂಸ್ತಾನದ ಘೋಷಣೆಗಳು ಕೇಳುತ್ತಿವೆ. ಈ ಮೊದಲು ನೆರೆಯ ವೈರಿ ಪಾಕಿಸ್ತಾನ ನಮಗೆ ಬೆದರಿಕೆ ಹಾಕುತ್ತಿದ್ದವು. ಅಂದಿನ ಸರ್ಕಾರಗಳು ಯಾವುದೇ ಕ್ರಮಕೈಗೊಳ್ಳುತ್ತಿರಲಿಲ್ಲ. ಇಂದು ಧಮ್ಕಿ ಹಾಕುತ್ತಿದ್ದವರ ಧ್ವನಿ ನಮ್ಮ ದೇಶದಲ್ಲಿ ಕೇಳದಂತೆ ಮಾಡಿದ್ದೇವೆ ಎಂದರು. ಇಡೀ ಜಗತ್ತು ನಮ್ಮ ಸೇನೆಯನ್ನು ಹೊಗಳಿದ್ರೆ ಇಲ್ಲಿಯ ಕಾಂಗ್ರೆಸ್ ಮತ್ತು ಜೆಡಿಎಸ್ ಸೇನೆ ನಡೆಸಿದ ಏರ್ ಸ್ಟ್ರೈಕ್ ವಿರೋಧ ಮಾಡುತ್ತಿವೆ. ಇಡೀ ವಿಶ್ವವೇ ಒಪ್ಪಿಕೊಂಡರೂ ಇವರು ಮಾತ್ರ ನಂಬುತ್ತಿಲ್ಲ. ಕೇವಲ ಒಬ್ಬ ಸಂಸದನನ್ನು ಆಯ್ಕೆ ಮಾಡದೇ ಒಂದು ಸದೃಢ ಸರ್ಕಾರಕ್ಕೆ ನೀವು ಮತ ನೀಡಬೇಕಿದೆ. ದೇಶದ ರಕ್ಷಣೆಗಾಗಿ ಬಲಿಷ್ಠ ನಿರ್ಣಯ ತೆಗೆದುಕೊಳ್ಳುವ ಸರ್ಕಾರಕ್ಕೆ ನೀಡಬೇಕಿದೆ ಎಂದು ಮನವಿ ಮಾಡಿಕೊಂಡರು.

ಫ್ರೆಶ್ ನ್ಯೂಸ್

Latest Posts

Featured Videos