ಬದುಕಿಗೆ ಭದ್ರ ಬುನಾದಿಯೇ ಮೋದಿ

ಬದುಕಿಗೆ ಭದ್ರ ಬುನಾದಿಯೇ ಮೋದಿ

ಶಿರಾ: ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡಿ ಮಹಿಳೆಯರ ಆರೋಗ್ಯಕರ ಬದುಕಿಗೆ ಭದ್ರ ಬುನಾದಿ ಹಾಕಿದ ಕೀರ್ತಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗ ಬೇಕಾದರೆ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡರಿಗೆ ಮತ ನೀಡಿ ಗೆಲ್ಲಿಸುವಂತೆ ರಾಜೇಶ್ ಗೌಡ ಪತ್ನಿ ಡಾ.ತೇಜಸ್ವಿನಿ ಮತದಾರರಿಗೆ ಮನವಿ ಮಾಡಿದರು.
ಶಿರಾ ತಾಲೂಕಿನ ಸೊರೆಕುಂಟೆ, ಪಂಜಿಗಾನಹಳ್ಳಿ, ಜಯನಗರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಸೋಮವಾರ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
ದೇಶದಲ್ಲಿ ಹಲವಾರು ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಬಡವರನ್ನು ಕೇವಲ ಮತ ಬ್ಯಾಂಕ್‌ಗಾಗಿ ಬಳಸಿ ಕೊಂಡು ನಿರ್ಲಕ್ಷ ವಹಿಸಿದ ಕಾರಣ ಆಭಿವೃದ್ಧಿ ಸಾಧ್ಯವಾಗಿಲ್ಲ. ಶಿರಾ ಕ್ಷೇತ್ರದ ಆಭಿವೃದ್ಧಿಯ ಕನಸು ಹೊತ್ತ ನನ್ನ ಪತಿ ರಾಜೇಶ್ ಗೌಡರಿಗೆ ಮತ ನೀಡಿ ಗೆಲ್ಲಿಸಿದರೆ ನಿಮ್ಮ ಮನೆ ಮಗನಾಗಿ ಸೇವೆ ಮಾಡಲಿದ್ದಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos