ಮಂಗಳೂರು, ಏ. 16, ನ್ಯೂಸ್ ಎಕ್ಸ್ ಪ್ರೆಸ್: ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ಎಂದು ಕೇಂದ್ರ ವಾಣಿಜ್ಯ ಮತ್ತು ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ತಿಳಿಸಿದರು.
ಕಳೆದ 5 ವರ್ಷದಲ್ಲಿ ಎಲ್ಲಾ ಕ್ಷೇತ್ರದಲ್ಲಿ ಆಗಿರುವ ಪ್ರಗತಿ, ಸಾಮಾಜಿಕ ಕ್ಷೇತ್ರದಲ್ಲಿ ಸಾಧಿಸಿರುವ ಸೌಹಾರ್ದತೆ ದೇಶದಲ್ಲಿ ಗೋಚರಿಸುತ್ತಿದೆ ಎಂದು ಹೇಳಿದರು.
ನಮ್ಮ ಸರ್ಕಾರದಲ್ಲಿ 30 ಹೊಸ ವಿಮಾನ ನಿಲ್ದಾಣಗಳು ಪ್ರಾರಂಭಗೊಂಡಿದ್ದು, ಇನ್ನೂ 100 ಆಗಬೇಕಿದೆ. ಮುಂದೆ 200 ವಿಮಾನ ನಿಲ್ದಾಣ ನಿರ್ಮಾಣದ ಗುರಿ ಹೊಂದಲಾಗಿದೆ. ಕಳೆದ ಜನವರಿಯಲ್ಲಿ ಮುಂಬೈನಲ್ಲಿ ನಡೆದ ವಿಶ್ವ ವೈಮಾನಿಕ ಸಮಾವೇಶದಲ್ಲಿ ದೇಶಕ್ಕೆ ಒಟ್ಟು 2,300 ವಿಮಾನ ನಿಲ್ದಾಣ ಆಗಬೇಕು ಎಂಬ ಅಭಿಪ್ರಾಯ ಬಂದಿದೆ ಎಂದು ತಿಳಿಸಿದರು.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣ ಅಂತಿಮವಾಗಿಲ್ಲ ಎಂದು ಹೇಳಿದ ಅವರು, ಈ ಪ್ರಸ್ತಾಪ ಇನ್ನೂ ಅಂತಿಮವಾಗಿಲ್ಲ. ಜೆಟ್ಏರ್ವೇಸ್ ಸಂಸ್ಥೆ ತೀವ್ರ ಹಣಕಾಸು ಬಿಕ್ಕಟ್ಟು ಎದುರಿಸುತ್ತಿದೆ, ಈ ಕುರಿತು ಸಾಲಗಾರರು, ಬ್ಯಾಂಕ್ ನವರು ಹಣಕಾಸು ವಿಚಾರಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ.