ಮೋದಿ ನಾಡಲ್ಲಿ ಚುನಾವಣೆಗೆ ರಣಕಹಳೆ

ಮೋದಿ ನಾಡಲ್ಲಿ ಚುನಾವಣೆಗೆ ರಣಕಹಳೆ

ಅಹ್ಮದಾಬಾದ್, ಮಾ. 12, ನ್ಯೂಸ್ ಎಕ್ಸ್ ಪ್ರೆಸ್: ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ  ಬಾರೀ ತಯಾರಾಗುತ್ತಿರುವ ಕಾಂಗ್ರೆಸ್ ಪಕ್ಷವು, ಇಂದು ಗುಜರಾತ್ ನಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದ್ದಯ, ಮೋದಿ ನಾಡಲ್ಲಿ ಚುನಾವಣೆಗೆ ರಣಕಹಳೆ ಊದಲಿದೆ.

ಕಾರ್ಯಕಾರಿಣಿ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಸಭೆಯು ಗುಜರಾತ್ ನ ಸಬರಮತಿನಲ್ಲಿ ನಡೆಯಲಿದೆ. ಸಭೆಯಲ್ಲಿ ಚುನಾವಣಾ ರಣತಂತ್ರ, ವಿವಿಧ ರಾಜ್ಯಗಳಲ್ಲಿ ಮೈತ್ರಿಯ ಧನಾತ್ಮಕ-ಋಣಾತ್ಮಕ ಪರಿಣಾಮ, ಪ್ರಚಾರ ತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ.

ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಇನ್ನೂ ಹಲವು ಕೂಡ ಎಐಸಿಸಿ ಪ್ರಮುಖ ಮುಖಂಡರು ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ ವಿಶೇಷ ಆಹ್ವಾನಿತರಾಗಿದ್ದಾರೆ ಜೊತೆಗೆ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos