ಕಲಬುರಗಿ, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯ ಕುರಿತು ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮುಧೋಳ ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ಭಾಷಣ ನಡೆಸಿದ ನಟಿ ವಿಜಯಶಾಂತಿ ಅರವರು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಏಕವಚನದಲ್ಲೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ನಂಬರ್ ಒನ್ ಕ್ರಿಮಿನಲ್. ಅವನಂತಹ ಕ್ರಿಮಿನಲ್ ನನ್ನು ನಾನು ಎಲ್ಲೂ ಕೂಡ ನೋಡಿಯೇ ಇಲ್ಲ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ಎತ್ತಿದ ಕೈ. ಆತನನ್ನು ನಂಬಿ ಮತ ಹಾಕಿದರೆ ನಮ್ಮ ಸಮಾಧಿ ನಾವೇ ತೋಡಿಕೊಂಡಂತೆ ಎಂದು ಹೇಳಿದ್ದಾರೆ.
ನೋಟು ಅಮಾನ್ಯೀಕರಣ, ಜಿ.ಎಸ್.ಟಿ. ಜಾರಿಯಿಂದ ದೇಶದ ಜನತೆ ಸಾಕಾಗಿ ಹೋಗಿದ್ದಾರೆ. ವಿದೇಶದಿಂದ ಕಪ್ಪು ಹಣ ತರುತ್ತೇನೆ ಎಂದು ಹೇಳಿದ್ದರು. ಆದರೆ ಕೆಲ ಉದ್ಯಮಿಗಳು ಇಲ್ಲಿಂದಲೇ ಸಾವಿರಾರು ಕೋಟಿ ರೂ ಲೂಟಿ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದಾರೆಂದು ವಿಜಯಶಾಂತಿ ಟೀಕಿಸಿದರು.