ಮೋದಿ ಸುಮಲತಾ ಮುಖಾಂತರ ದೇವೆಗೌಡರಿಗೆ ಟಾಂಗ್ ಕೊಡ್ತಾರ.!?

ಮೋದಿ ಸುಮಲತಾ ಮುಖಾಂತರ ದೇವೆಗೌಡರಿಗೆ ಟಾಂಗ್ ಕೊಡ್ತಾರ.!?

ಬೆಂಗಳೂರು, ಮೇ. 30, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಗೆದ್ದು ಬಂದಿದ್ದಾರೆ. ಇದೀಗ ಅವರಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗತ್ತಾ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ. ಮಂಡ್ಯದ ಸಂಸದೆ ಇದೀಗ ಸುಮಲತಾ ಅಂಬರೀಶ್ ಅವರು ಕೇಂದ್ರ ಸಚಿವರಾಗ್ತಾರ ಎಂಬ ಕುತೂಹಲ ಹೆಚ್ಚಾಗಿದೆ.

ಸುಮಲತಾ ಅವರನ್ನು ಮಂತ್ರಿ ಮಾಡುವುದರ ಮೂಲಕ ದೇವೇಗೌಡರಿಗೆ ಟಾಂಗ್ ಕೊಡುವ ಲೆಕ್ಕಚಾರವನ್ನುಮೋದಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಪ್ರಭಾವ ಮಂಡ್ಯ ಮತ್ತು ಮೈಸೂರು ಭಾಗದಲ್ಲಿ ಹೆಚ್ಚಾಗಿದೆ. ಹಾಗಾಗಿ ಆ ಪಕ್ಷಗಳ ಪ್ರಭಾವವನ್ನು ಕುಗ್ಗಿಸಲು ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಮೋದಿ ಬಿಗ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೋದಿ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ಸೂಚಿಸಿದ್ದರು. ಹೀಗಾಗಿ ಸುಮಲತಾಗೆ ಮೋದಿ ಸಚಿವ ಸ್ಥಾನ ಕೊಡುತ್ತಾರೆ ಎಂದು ಹೇಳಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos