ಮೋದಿಗೆ ಧನ್ಯವಾದ ತಿಳಿಸಿದ ಸಚಿವ ಪುಟ್ಟರಾಜು

ಮೋದಿಗೆ ಧನ್ಯವಾದ ತಿಳಿಸಿದ ಸಚಿವ ಪುಟ್ಟರಾಜು

ಮಂಡ್ಯ, ಮಾ.28, ನ್ಯೂಸ್ ಎಕ್ಸ್ ಪ್ರೆಸ್: ಪುಟ್ಟರಾಜು ಸ್ವಗ್ರಾಮ ಚಿನಕುರಳಿಯಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ. ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ.

ಸಚಿವ ಪುಟ್ಟರಾಜು ಅವರು ಚುನಾವಣೆ ಸಮಯದಲ್ಲಿ ಐಟಿ ದಾಳಿ ನಡೆಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಬೇಕು.

ಈ ದಾಳಿಯಿಂದ ಕೆಲಸ ಮಾಡಲು ಮತ್ತಷ್ಟು ಉತ್ಸಾಹ ಬಂದಿದೆ. ಇಂದು ನಾನು ಚುನಾವಣಾ ಪ್ರಚಾರಕ್ಕೆ ತೆರಳುತ್ತೇನೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos