ಮೋದಿಗೆ ಟೀಕಿಸಿದ ಸಿದ್ದರಾಮಯ್ಯ

ಮೋದಿಗೆ ಟೀಕಿಸಿದ ಸಿದ್ದರಾಮಯ್ಯ

ಬಾಗಲಕೋಟೆ, ಆ. 20: ‘ರಾಜ್ಯದಲ್ಲಿ ಪ್ರವಾಹ ಸ್ಥಿತಿಯಿಂದ ಜನರು ಸಂಕಷ್ಟದಲ್ಲಿರುವ ಬಗ್ಗೆ ಪ್ರಧಾನಿ ಮೋದಿಗೆ ಕಣ್ಣು ಕಾಣಿಸುತ್ತಿಲ್ಲ, ಕಿವಿ ಕೇಳಿಸುತ್ತಿಲ್ಲ’ ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಟೀಕಿಸಿದರು.

ಜಿಲ್ಲೆಯ ಬಾದಾಮಿ ತಾಲೂಕಿನ ಬೀರನೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪ್ರವಾಹ ಬಂದು 15 ದಿನವಾದರೂ ಕೇಂದ್ರ ಸರಕಾರದಿಂದ ಒಂದು ಪೈಸೆ ನೀಡಿಲ್ಲ. ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹೀಗೆ ಬಂದು ಹಾಗೆ ಹೋದರು. ರಾಜ್ಯದಲ್ಲಿ ಅಂದಾಜು 10 ಸಾವಿರ ಕೋಟಿ ರೂ. ಹಾನಿಯಾಗಿದೆ. ತಕ್ಷಣ ಕೇಂದ್ರ ಸರಕಾರ 5ಸಾವಿರ ಕೋಟಿ ರೂ. ನೀಡಬೇಕು, ಕೇಂದ್ರ ತಂಡ ಪರಿಶೀಲನೆ ನಡೆಸಿದ ನಂತರ ಉಳಿದ ಹಣ ಬಿಡುಗಡೆಗೊಳಿಸಲಿ. 2009ರಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿ ಪ್ರವಾಹ ಪೀಡಿತ ಪ್ರದೇಶಕ್ಕೆ 1,500 ಕೋಟಿ ರೂ. ಪರಿಹಾರ ನೀಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos