ರಾಜ್ಯಕ್ಕೆ ಹೆಚ್ಚಿನ ನೆರವು: ಸಿಎಂ

ರಾಜ್ಯಕ್ಕೆ ಹೆಚ್ಚಿನ ನೆರವು: ಸಿಎಂ

ಬೆಂಗಳೂರು, ಸೆ. 3: ಇಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪನವರು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಹ್ವಾನದ ಮೇರೆಗೆ ಮುಂಬಯಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದರು. ಅವರೊಂದಿಗೆ  ಮಹದಾಯಿ ನೀರಾವರಿ ಯೋಜನೆ ಬಗ್ಗೆ ಚರ್ಚಿಸಲಾಗುವುದು.‌ ಇದರ ಜತೆಗೆ ಕೃಷ್ಣಾ ಮೇಲ್ದಂಡೆ ಬಗ್ಗೆ ಫಡ್ನವಿಸ್ ಜತೆ ಮಾತುಕತೆ ನಡೆಸುತ್ತೇವೆ. ಈ ಬಗ್ಗೆ ಪ್ರಧಾನಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಇದೇ ಸೆ.6 ರಂದು ಸಚಿವ ಸಂಪುಟ ಸಭೆಯಿದೆ. ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು.‌ ಎಂದು ತಿಳಿದರು. ಸೆಪ್ಟೆಂಬರ್  ಏಳರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಪ್ರವಾಹದಿಂದ ಆಗಿರುವ ಅನಾಹುತಗಳ ಬಗ್ಗೆ ಮತ್ತೊಮ್ಮೆ ಸಂಪೂರ್ಣ ಮಾಹಿತಿ ನೀಡಲಾಗುವುದು.‌ ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿ ನಿಬಾಯಿಸಲು ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲಾಗುವುದು. ಕೇಂದ್ರದಿಂದ ಹೆಚ್ಚಿನ ಪರಿಹಾರ ಘೋಷಿಸಲು ಮನವಿ ಮಾಡುತ್ತೇವೆ. ರಾಜ್ಯಕ್ಕೆ ಹೆಚ್ಚಿನ ನೆರವು ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos