ಮೊಸಳೆ ಪ್ರತ್ಯಕ್ಷ

ಮೊಸಳೆ ಪ್ರತ್ಯಕ್ಷ

ಬೆಳಗಾವಿ, ಸೆ. 10 : ಕೃಷ್ಣಾ ನದಿಯ ಪ್ರವಾಹಕ್ಕೆ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಪರಿಣಾಮ ಆಹಾರ ಅರಸುತ್ತಾ ಜನವಸತಿ ಪ್ರದೇಶ ಮೊಸಳೆ ಬಂದಿದ್ದು, ಗ್ರಾಮಸ್ಥರು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.
ಸತ್ತಿ ಗ್ರಾಮದ ನಂದೇಶ್ವರ ರಸ್ತೆಗೆ ಹೊಂದಿಕೊಂಡಿರುವ ಅತ್ತಾರ ಜನವಸತಿ ಕಡೆ ಮೊಸಳೆ ಬಂದಿದೆ. ತೋಟದಲ್ಲಿ ಕೆಲಸ ಮಾಡುತ್ತಿರುವವರಿಗೆ ವಿಚಿತ್ರ ಶಬ್ದ ಕೇಳಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಶಬ್ದ ಕೇಳಿ ಬಂದ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದಾಗ ಮೊಸಳೆ ಇರುವುದು ಅವರ ಗಮನಕ್ಕೆ ಬಂದಿದೆ. ಬಳಿಕ ಜನವಸತಿ ಪ್ರದೇಶದ ಜನ ಮೊಸಳೆಯನ್ನು ಹಿಂಬಾಲಿಸಿ ಹಗ್ಗದಿಂದ ಕಟ್ಟಿ ಹಾಕಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos