ಬೆಂಗಳೂರು: ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಜೆಡಿಎಸ್
ಭಾರೀ ಸಿದ್ಧತೆ ನಡೆಸಿದ್ದು, ಜೆಡಿಎಸ್ ಇಂದು ಸಂಜೆ ಪಕ್ಷದ ಪ್ರಮುಖ ಮುಖಂಡರ ಸಭೆ ನಡೆಸಲಿದೆ.
ಇಂದು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಲೋಕಸಭಾ ಕ್ಷೇತ್ರವಾರು ಮುಖಂಡರ ಸಭೆ ನಡೆಸಲಾಗುತ್ತಿದೆ.
ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕಾರ್ಯತಂತ್ರ ಸೇರಿದಂತೆ
ಬಹತೇಕ ವಿಷಯಗಳ ಕುರಿತು ಮುಖಂಡರೊಂದಿಗೆ ದೇವೇಗೌಡರು ಕ್ಷೇತ್ರವಾರು ಸಮಾಲೋಚನೆ ನಡೆಸಲಿದ್ದಾರೆ. ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಪ್ರಮುಖ ಮುಖಂಡರ ವಿಷೇಶ ಸಭೆಯನ್ನು ನಡೆಸಲಾಗುತ್ತದೆ.
ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಸಮಾಲೋಚನೆ ನಡೆಸಿ, ಗೌಡರು ಪಕ್ಷ
ಸಂಘಟನೆ ಚುನಾವಣೆಗೆ ರಣತಂತ್ರ ರೂಪಿಸುವ ಕುರಿತು
ಸೇರಿದಂತೆ ಅನೇಕ ಸಲಹೆ, ಸೂಚನೆಗಳನ್ನು ಪಕ್ಷದ ಮುಖಂಡರಿಗೆ ನೀಡಲಿದ್ದಾರೆ.