ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ: ಸಂಸದ ಪ್ರತಾಪ್​ ಸಿಂಹ

ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ: ಸಂಸದ ಪ್ರತಾಪ್​ ಸಿಂಹ

ಮೈಸೂರು: ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಟಿಕೆಟ್ ನೀಡಲಾಗುತ್ತೆ ಎನ್ನಲಾಗುತ್ತಿದೆ.

ಹೌದು ಈ ವಿಚಾರವಾಗಿ ನಗರದಲ್ಲಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ್​ ಸಿಂಹ, ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ಯಾರು ಏನೇ ಕೊಡುತ್ತೇನೆ ಎಂದರೂ ನಾನು ಎಲ್ಲೂ ಹೋಗುವುದಿಲ್ಲ. ಸಾಯುವವರೆಗೂ ನಾನು ಬಿಜೆಪಿ ಕಾರ್ಯಕರ್ತ ಎಂದಿದ್ದಾರೆ.

ಟಿಕೆಟ್ ವಿಚಾರದಲ್ಲಿ ಬಿಎಸ್​​ ಯಡಿಯೂರಪ್ಪರನ್ನು ಎಳೆದು ತರಬೇಡಿ. BSY ಬಿಜೆಪಿಯನ್ನು ಕಟ್ಟದಿದ್ರೆ ನಮ್ಮಂಥವರು ಎಂಪಿ ಆಗ್ತಿದ್ವಾ ಎಂದಿದ್ದಾರೆ. ಕರ್ನಾಟಕಕ್ಕೆ ಯಡಿಯೂರಪ್ಪ ಒಂದು ರೀತಿ ಮೋದಿ ಇದ್ದ ಹಾಗೆ. ಪ್ರಧಾನಿ ಮೋದಿ ನನಗೆ ಸದಾ ಪ್ರೇರಣೆ ಎಂದರು.

ಮೋದಿ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಸ್ವೀಕರಿಸುತ್ತೇನೆ. ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರೂ ತೃಪ್ತಿ ಇದೆ, ಕೊಡದಿದ್ದರೂ ತೃಪ್ತಿ ಇದೆ ಎಂದು ಹೇಳಿದ್ದಾರೆ.

ಟಿಕೆಟ್​ ಕೈತಪ್ಪುವ ಸಾಧ್ಯತೆ ಹಿನ್ನೆಲೆ ಬೆಂಬಲಿಗರು ಪ್ರತಿಭಟನೆ ಮಾಡದಂತೆ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಲ್ಲದೇ ನಾನು ಏನೂ ಅಲ್ಲ. ಇಲ್ಲಿರುವ ಎರಡು ಫೋಟೋ ನೋಡಿ ಅರ್ಥ ಮಾಡಿಕೊಳ್ಳಿ. ನನ್ನ ರಾಜಕೀಯ ಅಸ್ತಿತ್ವ ಪ್ರಧಾನಿ ಮೋದಿ ಅವರಿಂದಲೇ. ಈ‌ ಹಿನ್ನೆಲೆಯಲ್ಲಿ ಯಾರು ಪ್ರತಿಭಟನೆ ಮಾಡಬೇಡಿ. ನಾವೆಲ್ಲ ಒಂದೇ ಕುಟುಂಬದವರು ಮೋದಿಗಾಗಿ ಕೆಲಸ ಮಾಡೋಣ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos