ಶ್ರೀಗಳ ಆರೋಗ್ಯ ವಿಚಾರಿಸಿದ ಸೀತರಾಮನ್

ಶ್ರೀಗಳ ಆರೋಗ್ಯ ವಿಚಾರಿಸಿದ ಸೀತರಾಮನ್

ಬೆಂಗಳೂರು,ಡಿ. 21 : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ದೂರವಾಣಿ ಮೂಲಕ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ. ಪೇಜವರ ಶ್ರೀಗಳಂತವರು ಲಕ್ಷಕ್ಕೊಬ್ಬರು ಮಾತ್ರ ಈ ಭೂಮಿಯಲ್ಲಿ ಹುಟ್ಟಿ ಬರುತ್ತಾರೆ. ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುವುದು ಇಡೀ ಸಮಾಜದ ಕರ್ತವ್ಯ ಎಂದು ಅವರು ಹೇಳಿದ್ದಾರೆ.
ಅಲ್ಲದೆ ಶ್ರೀಗಳ ಆರೋಗ್ಯಸಂಬಂಧಿಸಿದಂತೆ ಯಾವುದೇ ತುರ್ತು ನೆರವು ಅಗತ್ಯವಿದ್ದಲ್ಲಿ ತಮಗೆ ತಿಳಿಸುವಂತೆಯೂ ಸಂಬಂಧಪಟ್ಟವರಿಗೆ ಅವರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಮಣಿಪಾಲ್ನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos