ಮಂಡ್ಯದಲ್ಲಿ ಮಾ.22ರಿಂದ ಸಿಎಂ ಹೆಚ್.ಡಿಕೆ ಭರ್ಜರಿ ಪ್ರಚಾರ

ಮಂಡ್ಯದಲ್ಲಿ ಮಾ.22ರಿಂದ ಸಿಎಂ ಹೆಚ್.ಡಿಕೆ ಭರ್ಜರಿ ಪ್ರಚಾರ

ಬೆಂಗಳೂರು, ಮಾ.19, ನ್ಯೂಸ್ ಎಕ್ಸ್ ಪ್ರೆಸ್: 2019ರ ಸಾಲಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದು, ಮಾ.22ರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಅರಂಭಿಸಲಿದ್ದಾರೆ.

ಮಾ.22ರಿಂದ ಮುಖ್ಯಮಂತ್ರಿ ಅವರು ಪ್ರಚಾರ ಆರಂಭಿಸಲು ಮುಂದಾಗಿದ್ದು, ಮಗನ ಪರ ಮೊದಲ ಪ್ರಚಾರ ಆರಂಭಿಸಲಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಪ್ರಬಲ ಸ್ಪರ್ಧಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಿಖಿಲ್ ಪರ ಹೆಚ್ಚಿನ ಪ್ರಚಾರ ಕೈಗೊಳ್ಳಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಮಂಡ್ಯ ಹೊರತಾಗಿ ಬೇರೆ ಎಲ್ಲ ಕ್ಷೇತ್ರಗಳಲ್ಲಿ ಸಿ ಮುಖ್ಯಮಂತ್ರಿ ಪ್ರಚಾರ ನಡೆಸಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳಿರುವ ಕ್ಷೇತ್ರಗಳಲ್ಲಿ 3 ದಿನಗಳ ಕಾಲ ಪ್ರಚಾರ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಿರುವ ಕ್ಷೇತ್ರಗಳಲ್ಲಿ 1 ದಿನ ಪ್ರಚಾರ ನಡೆಸಲು ನಿರ್ಧರಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos