ಬೆಂಗಳೂರು, ಅ. 21: ಹೊಸಕೋಟೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿಯಲ್ಲಿನ ಗೊಂದಲ ಪರಿಹಾರವಾಗಿಲ್ಲ. ಇದರ ಮಧ್ಯೆ ನಾನು ನನ್ನ ಕೆಲಸ ಮಾಡಿಕೊಂಡಿದ್ದೇನೆ ಎಂದು ಚುನಾವಣಾ ತಯಾರಿಯಲ್ಲಿರುವ ಅನರ್ಹ ಶಾಸಕ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ, ಕೋರ್ಟ್ ವಿಚಾರಣೆ ಹಾಗೂ ಕ್ಷೇತ್ರದಲ್ಲಿನ ಬಿಜೆಪಿ ಕಾರ್ಯಕರ್ತರ ವಿರೋಧ ಸಂಬಂಧ ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಮಾತನಾಡಿದರು. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಸ್ಪರ್ಧೆಗೆ ಯತ್ನಿಸುತ್ತಿದ್ದಾರೆ, ಆದರೆ ಈ ಕ್ಷಣದವರೆಗೂ ಗೊಂದಲ ಬಗೆಹರಿದಿಲ್ಲ. ನಮ್ಮ ಕೆಲಸವನ್ನು ನಾವು ಮಾಡ್ತಿದ್ದೀವಿ, ಸ್ವತಂತ್ರ ಅಭ್ಯರ್ಥಿಗಳು ಅವರ ಕೆಲಸ ಮಾಡ್ತಿದ್ದಾರೆ. ಕೋರ್ಟ್ನಲ್ಲಿ ನಮ್ಮ ಪರವಾಗಿ ತೀರ್ಪು ಬರುವ ವಿಶ್ವಾಸ ಇದೆ. ತೀರ್ಪು ಏನೇ ಬಂದರೂ ಅದಕ್ಕೆ ತಲೆ ಬಾಗುತ್ತೇವೆ ಎಂದರು.