ಪಿಡಿಒಗೆ ಎಂಟಿಬಿ ತರಾಟೆಗೆ

ಪಿಡಿಒಗೆ ಎಂಟಿಬಿ ತರಾಟೆಗೆ

ಹೊಸಕೋಟೆ:ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು. ಈಗಾಗಲೇ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು, ಆಡಾಳಿತಾಧಿಕಾರಿಗಳ ಮಾರ್ಗದರ್ಶನದಂತೆ ಜನರ ಕುಂದು-ಕೊರತೆಗಳಿಗೆ ಸ್ಪಂದಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು. ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹೆತ್ತಕ್ಕಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ ನಂತರ ಸಾರ್ವಜನಿಕರ ದೂರಿನ ಮೇಲೆ ಪಿಡಿಒರನ್ನು ತರಾಟೆಗೆ ತೆಗೆದುಕೊಂಡರು. ಹೆತ್ತಕ್ಕಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಒ ಅವರ ಮೇಲೆ ಸ್ಥಳೀಯರು ಆರೋಪ ಮಾಡುತ್ತಿದ್ದು, ಉತ್ತಮ ಕೆಲಸ ಮಾಡುತ್ತಿಲ್ಲ ಹಾಗೂ ಏಕ ಪಕ್ಷಿಯವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪವಿದೆ. ಅದರಂತೆ ಅಧಿಕಾರಿಗಳು ಉತ್ತಮ ಕೆಲಸ ಮಾಡಬೇಕು. ಯಾವುದೇ ಒತ್ತಡಕ್ಕೆ ಮಣಿಯುವ ಮೊದಲು ಸತ್ಯಾ ಸತ್ಯತೆಯನ್ನು ಅರಿಯುವಂತಾಗಬೇಕು. ಈಗಾಗಲೇ ಇಲ್ಲಿನ ಪಿಡಿಒ ಮೇಲೆ ಸ್ಥಳೀಯರು ಹೆಚ್ಚಿನ ಆರೋಪ ಮಾಡುತ್ತಿದ್ದಾರೆ. ಉತ್ತಮವಾಗಿ ಕೆಲಸ ಮಾಡಲು ಬಂದಿದ್ದರೆ ಮಾತ್ರ ಇಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು.

 

ಫ್ರೆಶ್ ನ್ಯೂಸ್

Latest Posts

Featured Videos