ಉಡುಪಿ, ಜು. 3 : ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದ ಮಳೆಯಲ್ಲಿ ಸಿಲುಕಿದ್ದ ಪೇಜಾವರ ಶ್ರೀಗಳಿಗೆ ಮುಸ್ಲಿಂ ಟ್ಯಾಕ್ಸಿ ಚಾಲಕರೋರ್ವರು ಸಹಾಯ ಹಸ್ತ ಚಾಚಿದ್ದಾರೆ. ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಸುರಕ್ಷಿತವಾಗಿ ಡೊಂಬಿವಿಲಿಗೆ ತಲುಪಿಸಿದ ಘಟನೆ ನಡೆದಿದೆ. ಪೇಜಾವರ ಶ್ರೀಗಳು ಬರೋಡಾದಿಂದ ಡೊಂಬಿವಿಲಿಗೆ ರೈಲಿನಲ್ಲಿ ಪ್ರಯಾಣಿಸುತಿದ್ದರು.
ಭಾರೀ ಮಳೆಯಿಂದಾಗಿ ಸುಮಾರು 50 ಕಿ.ಮೀ.ನಷ್ಟುಹಿಂದೆ ಬೊರಿವಿಲಿಯಲ್ಲಿ ರೈಲು ಮುಂದಕ್ಕೆ ಹೋಗಲಾಗದೇ ನಿಂತುಬಿಟ್ಟಿತು. ಟ್ಯಾಕ್ಸಿಯಲ್ಲಿ ಡೊಂಬಿವಿಲಿಗೆ ಹೊರಡಲು ಶ್ರೀಗಳು ಸಿದ್ಧರಾದಾಗ ಮಳೆಯಿಂದಾಗಿ ಅಲ್ಲಿನ ಟ್ಯಾಕ್ಸಿ ಚಾಲಕರು ಒಪ್ಪಲಿಲ್ಲ. ಕರ್ನಾಟಕದ ಕಲಬುರಗಿಯ ಟ್ಯಾಕ್ಸಿ ಚಾಲಕ ಶರ್ಫುದ್ದೀನ್ ಮಲಿಕ್ ಶ್ರೀಗಳನ್ನು ಡೊಂಬಿವಿಲಿಗೆ ತಲುಪಿಸಲು ಮುಂದೆ ಬಂದರು. ಭಾರೀ ಮಳೆಯಲ್ಲಿಯೂ ಶ್ರೀಗಳನ್ನು 12 ಗಂಟೆಗೆ ಡೊಂಬಿವಿಲಿಗೆ ತಲುಪಿಸಿದರು.