ಬೆಂಗಳೂರು, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ತುಮಕೂರಿನಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕಾಂಗ್ರೆಸ್ ನ ಮುದ್ದಹನುಮೇಗೌಡ ನಾಮಪತ್ರವನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.
ಕಾಂಗ್ರೆಸ್ ನ ಹೈಕಮಾಂಡ್ ನ ಒತ್ತಡಕ್ಕೆ ಮಣಿದು ಈನಿರ್ಧಾರ ಕೈಗೊಂಡಿದ್ದಾರೆ . ನಾಮಪತ್ರವನ್ನು ಜಿಲ್ಲಾಧಿಕಾರಿ ಕಚೇರಿಂದ ವಾಪಸ್ ಪಡೆಯಲು ಮುದ್ದಹನುಮೇಗೌಡ ಅವರು ತನ್ನ ಆಪ್ತರಾದ ರಾಯಸಂದ್ರ ರವಿ ಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿರುವ ಹನುಮೇಗೌಡ ಕ್ಷೇತ್ರದಿಂದ ದೂರ ಇರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.