ಮೈಸೂರು, ಮೇ . 14, ನ್ಯೂಸ್ ಎಕ್ಸ್ ಪ್ರೆಸ್: ಮೈಸೂರಿನ ಹುಣಸೂರು ಮುಖ್ಯರಸ್ತೆ ಸಮೀಪದ ನಾಗವಾಲದ ತೋಟದ ಮನೆಯಲ್ಲಿ ವಯೋವೃದ್ಧ ದಂಪತಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು,ಈರತ್ತಣ್ಣ (80), ಪತ್ನಿ ಶಿವಮ್ಮ (75)ಎಂಬುವವರನ್ನು ಕೊಲೆಯಾದ ದುರ್ದೈವಿಗಳಾಗಿದ್ದಾರೆ.
ತೋಟದಲ್ಲಿದ್ದ ಸೆಂಟ್ರಿಂಗ್ ಸಾಮಾನು ನೋಡಿಕೊಳ್ಳಲು ವೃದ್ಧದಂಪತಿಗಳು ತೋಟದ ಮನೆಯಲ್ಲಿ ಉಳಿದುಕೊಂಡಿದ್ದರು. ಆದರೆ ಯಾವ ಕಾರಣಕ್ಕೆ ಕೊಲೆ ನಡೆದಿರಬಹುದು ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಇಲವಾಲ ಪೊಲೀಸರ ಭೇಟಿ ನೀಡಿದ್ದು, ತೀವ್ರ ವಿಚಾರಣೆ ನಡೆಸ್ತಿದ್ದಾರೆ.