ಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ನೀಡುತ್ತಾರೆ: ಬಿಎಸ್ ವೈ

ಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ನೀಡುತ್ತಾರೆ: ಬಿಎಸ್ ವೈ

ಹುಬ್ಬಳ್ಳಿ, ಮೇ. 10,ನ್ಯೂಸ್ ಎಕ್ಸ್ ಪ್ರೆಸ್:  ರಾಜ್ಯದಲ್ಲಿ ಚಿಂಚೋಳಿ ಹಾಗೂ ಕುಂದಗೋಳ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಭ್ರಷ್ಟಾಚಾರದ ಹಣದಿಂದ ಗೆಲುವು ಪಡೆಯುವುದು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೈತ್ರಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದು ನಿಲ್ಲಿಸಬೇಕು ಎಂದರು. ಅಲ್ಲದೇ ಮೈತ್ರಿ ಸರ್ಕಾರದಲ್ಲಿ ಈಗಾಗಲೇ ಆಂತರಿಕ ಕಚ್ಚಾಟ ಆರಂಭವಾಗಿದ್ದು, ಮತ್ತೆ ಅಪ್ಪ ಮಗ ರೆಸಾರ್ಟ್ ಸೇರಿದ್ದಾರೆ. ಸೋಲಿನ ಭಯದಿಂದ ದೇವೇಗೌಡ, ಕುಮಾರಸ್ವಾಮಿ ಕಂಗಾಲಾಗಿದ್ದಾರೆ ಎಂದರು.

ಇನ್ನು ರಾಜ್ಯದಲ್ಲಿ ಉಪಚುನಾವಣೆ ಬಳಿಕ ಬಿಜೆಪಿ ಸಂಖ್ಯಾಬಲ 106 ಆಗಲಿದೆ. ಮೂವರು ಪಕ್ಷೇತರರು ಬೆಂಬಲ ನೀಡುತ್ತಾರೆ. ಈಗಾಗಲೇ ರಾಜ್ಯದ ಮೈತ್ರಿ ಪಕ್ಷಗಳ 20ಕ್ಕೂ ಹೆಚ್ಚು ಶಾಸಕರು ಅತೃಪ್ತಿ ಹೊಂದಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬರುವ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos