ನಾಮ ಸಂಕೀರ್ತನೆ ಕಾರ್ಯಕ್ರಮ

ನಾಮ ಸಂಕೀರ್ತನೆ ಕಾರ್ಯಕ್ರಮ

ಬೆಂಗೂರು, ಜ. 03: ಶ್ರೀ ಪಾಂಡುರಂಗ ವಿಷ್ಣು ಸಹಸ್ರನಾಮ ಮಂಡಳಿ ವತಿಯಿಂದ ವೈಕುಂಠ ಏಕಾದಶಿ ಪ್ರಯುಕ್ತ ಜ.5 ರಂದು ಮಲ್ಲೇಶ್ವರ ಆಟದ ಮೈದಾನದಲ್ಲಿ ನಾಮ ಸಂಕೀರ್ತನೆ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ಮಂಡಳಿಯ ಅಧ್ಯಕ್ಷ ಜಯಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.5 ರಂದು ಸಂಜೆ ೫ಕ್ಕೆ ಕೂಡ್ಲೋರ್ ಬ್ರಹ್ಮರ್ಶಿ ಗೋಪಿ ಭಾಗವತರು ನಾಮ ಸಂಕೀರ್ತನೆ ನಡೆಸಿಕೊಡುತ್ತಾರೆಂದರು

ಜ.6 ರಂದು ಬೆಳಗ್ಗೆ 5 ಗಂಟೆಯಿಂದ ಜ.7 ರ ಬೆಳಗ್ಗೆ 8 ಗಂಟೆಯವರೆಗೆ ಸತತ 27 ಗಂಟೆಗಳ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣವನ್ನು ಆಯೋಜಿಸಲಾಗಿದೆ. ಇದರಲ್ಲಿ 108 ಬಾರಿ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದೆ. ಜೊತೆಗೆ ಉಚಿತ ನೇತ್ರ ತಪಾಸಣೆ, ಉಚಿತ ಕನ್ನಡಕ ವಿತರಣೆ, ಬಿ.ಪಿ, ಮಧುಮೇಹ ಹಾಗೂ ದಂತ ತಪಾಸಣೆಯನ್ನು ಉಚಿತವಾಗಿ ಮಾಡಲಾಗುವುದು ಎಂದರು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಯಾದಗಿರಿ ಯತಿರಾಜ ನಾರಾಯಣ ಜೀಯರ್, ಸಂಸ್ಕೃತ ವಿದ್ವಾಂಸ ಅರಳು ಮಲ್ಲಿಗೆ ಪಾರ್ಥಸಾರಥಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos