ನಾನೇನು ಸನ್ಯಾಸಿಯಲ್ಲ: ಸಿದ್ದರಾಮಯ್ಯ

ನಾನೇನು ಸನ್ಯಾಸಿಯಲ್ಲ: ಸಿದ್ದರಾಮಯ್ಯ

ದಾವಣಗೆರೆ, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯನವರು, ಬಿ.ಎಸ್.ಯಡಿಯೂರಪ್ಪಗೆ ಮಾನ ಮರ್ಯಾದೆ ಇಲ್ಲ, ಅಧಿಕಾರದ ಹುಚ್ಚು ಹಿಡಿದಿದೆ ಅಂತಾ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರ ಬೀಳುತ್ತೆ ಎನ್ನುತ್ತಾರೆ ಎಂದು ಕಿಡಿ ಕಾರಿದರು.

ಮುಂದೆ ನಮ್ಮ ಸರ್ಕಾರ ಬಂದರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದಿರುವೆ. ಆದರೆ, ನಾಳೆಯೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಲ್ಲವಲ್ಲ. ನಾನು ಮುಖ್ಯಮಂತ್ರಿಯಾದರೆ, 10 ಕೆ.ಜಿ ಅಕ್ಕಿ ಕೊಡುವೆ ಎಂದಿರುವೆ. ನಾನು ಸನ್ಯಾಸಿಯಲ್ಲ ಅಂತಾ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos