ರಾಜೀನಾಮೆ ನಾನ್ಯಾಕೆ ಕೊಡಲಿ: ಸಿಎಂ ತಿರುಗೇಟು

ರಾಜೀನಾಮೆ ನಾನ್ಯಾಕೆ ಕೊಡಲಿ: ಸಿಎಂ ತಿರುಗೇಟು

ಬೆಂಗಳೂರು, ಜು. 11 : ರಾಜ್ಯ ರಾಜಕೀಯದ ಹೈಡ್ರಾಮಾ ಕೊನೆಯ ಘಟ್ಟಕ್ಕೆ ಬಂದು ತಲುಪಿದೆ.  17 ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ಸಮ್ಮಿಶ್ರ ಸರ್ಕಾರ ಬಹುಮತ  ಕಳೆದುಕೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ನಾಯಕರು ಆಗ್ರಹ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರ ಬಿಡಲು ಒಪ್ಪದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಬಿಎಸ್ ಯಡಿಯೂರಪ್ಪನವರು ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ರಾಜಿನಾಮೆ ನೀಡುತ್ತಾರೆಯೇ ಎಂಬ ಪ್ರಶ್ನೆಗೆ, ನಾನ್ಯಾಕೆ ರಾಜೀನಾಮೆ ನೀಡಬೇಕು ಎಂದು ಖಾರವಾಗಿ ಪ್ರಶ್ನಿಸಿದರು.  ಬಿ.ಎಸ್.ಯಡಿಯೂರಪ್ಪ ಸರ್ಕಾರದ ಬಗ್ಗೆ ಉಲ್ಲೇಖ ಮಾಡಿದ ಸಿಎಂ, “2009-10 ರಲ್ಲಿ ಸರ್ಕಾರ ಏನಾಗಿತ್ತು? ಬಿಎಸ್ ಯಡಿಯೂರಪ್ಪನವರು  ಮುಖ್ಯಮಂತ್ರಿ ಆಗಿದ್ದಾಗ 18 ಜನ ಶಾಸಕರು ರಾಜೀನಾಮೆ ನೀಡಿದ್ದರು. ಆಗ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ?” ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos