ಭೋಪಾಲ್, ಮೇ. 16, ನ್ಯೂಸ್ ಎಕ್ಸ್ ಪ್ರೆಸ್: ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು, ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ, ಆತನ್ನನ್ನು ಉಗ್ರ ಎಂಬುವವರಿಗೆ ಜನ ಉತ್ತರಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ತಮಿಳು ನಟ, ಕಮಲ್ ಹಾಸನ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ನಾರಹೂರಾಮ್ ಗೋಡ್ಸೆ ಒಬ್ಬ ಉಗ್ರ. ಆತನಿಂದಲೇ ಈ ದೇಶದಲ್ಲಿ ಭಯೋತ್ಪಪಾದನೆ ಆರಂಭವಾಯಿತು ಎಂದಿದ್ದರು.
ಈ ಹೇಳಿಕೆಗೆ ಪತ್ರಕರ್ತರು ಸಾಧ್ವಿ ಅವರ ಪ್ರತಿಕ್ರಿಯೆ ಕೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾಧ್ವಿ, ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತರಾಗಿದ್ದರು. ಅವರು ದೇಶಭಕ್ತರಾಗಿಯೇ ಉಳಿಯುತ್ತಾರೆ. ಅವರನ್ನು ಉಗ್ರ ಎಂದು ಕರೆಯುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದರು.