ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ

ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ

ಬೆಂಗಳೂರು, ಜು. 3:  ಬೆಂಗಳೂರು ಹೊರವಲಯ ಆನೇಕಲ್ನ  ನಾರಾಯಣಪುರದ ಮನೆಯೊಂದರಲ್ಲಿ ಕೊಲೆಯಾಗಿದೆ. ಹೌದು, ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನ ಮನೆಯಲ್ಲಿಯೇ ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ.

ಚೌಡಪ್ಪ (45) ಮೃತ ದುರ್ದೈವಿ. ಎರಡು ದಿನಗಳ ಹಿಂದೆ ಕೊಲೆ ಮಾಡಿರುವ ಶಂಕೆ. ಸುತ್ತಮುತ್ತಲಿನ ಮನೆಯವರಿಗೆ ಕೊಳೆತ ವಾಸನೆ ಬಂದಾಗ ಅಲ್ಲಿಯ ಜನರು ಪೋಲಿಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಚೌಡಪ್ಪ ಒಂದು ವರ್ಷದ ಹಿಂದೆ ಪತ್ನಿ ಆತ್ಮಹತ್ಯೆ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

ಚೌಡಪ್ಪ ಅವರಿಗೆ ಒಬ್ಬ ಮಗನಿದ್ದಾರೆ. ಆದರೆ, ಮಗನು ಇದ್ದರು ಇಲ್ಲಿದಹಾಗೆ ಹೌದು, ಇವರ ಮಗ ಚೌಡಪ್ಪನ ಜೊತೆ ಇರದೆ ಬೇರೊಂದು ಮನೆಯಲ್ಲಿ ವಾಸವಾಗಿದ್ದ. ಸ್ಥಳಕ್ಕೆ ಆನೇಕಲ್ ಪೋಲಿಸರ ಭೇಟಿ ನೀಡಿ ಪರಿಶೀಲನೆಮಾಡುತ್ತಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲು ಮಾಡಿಕೊಂಡ ಆನೇಕಲ್ ಪೋಲಿಸರು.

ಫ್ರೆಶ್ ನ್ಯೂಸ್

Latest Posts

Featured Videos