ಬೆಂಗಳೂರು: ನಾಳೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯಲಿದೆ.
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಜೆ 5 ಗಂಟೆಗೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಕಾಂಗ್ರೆಸ್ ಶಾಸಕರ ಬೇಡಿಕೆಗಳ ಬಗ್ಗೆ ಹಾಗೂ ಆಪರೇಷನ್ ಕಮಲಕ್ಕೆ ಪ್ರತಿತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ಬಜೆಟ್ನಲ್ಲಿ ಕಾಂಗ್ರೆಸ್ ಕಾರ್ಯಕ್ರಮಗಳ ಜಾರಿ ಬಗ್ಗೆ ಬೇಡಿಕೆ ಪಟ್ಟಿಯನ್ನ ಸಿದ್ದರಾಮಯ್ಯ ಸಿಎಂಗೆ ಸಲ್ಲಿಸಲಿದ್ದಾರೆ.