ನನ್ನ ರಾಜಕೀಯ ಗುರು ಸಿದ್ದರಾಮಯ್ಯ:ಎ.ಮಂಜು

ನನ್ನ ರಾಜಕೀಯ ಗುರು ಸಿದ್ದರಾಮಯ್ಯ:ಎ.ಮಂಜು

ಕೊಣನೂರು, ಏ. 15, ನ್ಯೂಸ್ ಎಕ್ಸ್ ಪ್ರೆಸ್: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ಮಂಜು ಅವರು, ನನ್ನ ರಾಜಕೀಯ ಗುರು ಹಾಗೂ ಹಿತೈಷಿ ಮಾಜಿ ಸಿಎಂ ಸಿದ್ದರಾಮಯ್ಯನವರೇ ಆಗಿದ್ದಾರೆ ಎಂದು ಹೇಳಿದ್ದಾರೆ.

ಎ.ಮಂಜು ಅವರು ಕೊಣನೂರು ಹಾಗೂ ರಾಮನಾಥಪುರಗಳಲ್ಲಿ ಮತ ಪ್ರಚಾರ ನಡೆಸಿದರು, ಈ ವೇಳೆ ಮಾತನಾಡಿದ ಎ.ಮಂಜು, ನಾನು ಯಾವುದೇ ಪಕ್ಷದಲ್ಲಿದ್ದರೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುವವನು. ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಬಂದು ನನ್ನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನನ್ನು ಬಿಜೆಪಿಗೆ ಹೋಗದಂತೆ ತಡೆದೆ ಎಂದಿದ್ದಾರೆ.

ಕಾಂಗ್ರೆಸ್ ತೊರೆಯುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ನನ್ನನ್ನು ಬೇರೆ ಪಕ್ಷಕ್ಕೆ ಹೋಗದಂತೆ ತಡೆದಿದ್ದು ಸತ್ಯ. ಆದರೆ, ನನ್ನ ಹಾಸನ ಜಿಲ್ಲಾ ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಬಾರದು ಎಂಬ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡೆ ಎಂದರು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos