ಬೆಂಗಳೂರು , ಏ. 22 ನ್ಯೂಸ್ ಎಕ್ಸ್ ಪ್ರೆಸ್: ಕನ್ನಡ ಚಿತ್ರರಂಗದ ಖ್ಯಾತ ನಟ ಯಶ್ ರವರು, ನನ್ನನ್ನು ಟಾರ್ಗೆಟ್ ಮಾಡೋರು, ಹುಷಾರಾಗಿರಿ, ನಾನಂತೂ ಸುಮ್ಮನೆ ಇರುವುದಿಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ.
ಅವರು ಇಂದು ಅವನಿ ಫೌಂಡೇಶನ್ನಿಂದ ವಿಶ್ವ ಭೂಮಿ ದಿನ ಪ್ರಯುಕ್ತ ನಡೆದ ಸಮಾರಂಭಕ್ಕೆ ಆಗಮಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆಯಲ್ಲಿ ಹಲವು ನಾಯಕರು ನೀಡಿದ್ದ ಹೇಳಿಕೆಗೆ ಸಂಬಂಧಪಟ್ಟತೆ ಉತ್ತರಿಸಿದ್ದ ನನ್ನ ಟಾರ್ಗೆಟ್ ಮಾಡುವುದ ಅಷ್ಟು ಸುಲಭವಲ್ಲ, ಇದಲ್ಲದೇ ನನ್ನನ್ನು ಟಾರ್ಗೆಟ್ ಮಾಡೋರು, ಹುಷಾರಾಗಿರ ಬೇಕು ಅಂತ ತಮ್ಮ ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.